ನಮ್ಮ ಕನ್ನಡ ಚಿತ್ರರಂಗದ ಪವರಸ್ಟಾರ್ ಪುನೀತ್ ರಾಜಕುಮಾರ್ ರವರು ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಪ್ರಮುಖ ನಾಯಕನಟರಾಗಿದ್ದು ಅಭಿಮಾನಿಗಳಿಂದ ಪ್ರೀತಿಯಾಗಿ ಅಪ್ಪು ಎಂದೇ ಕರೆಯಿಸಿಕೊಳ್ಳುವ ಪುನೀತ್ ರವರು ನಟನೆಯಲ್ಲದೇ ಹಿನ್ನಲೆ ಗಾಯಕರಾಗಿ ನಿರ್ಮಾಪಕರಾಗಿಯೂ ಕೂಡ ಪ್ರಸ್ತುತರಾಗಿದ್ದರು. ಹೌದು ಸುಮಾರು ನಾಲ್ಕು ದಶಕಗಳ ಕಾಲ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಮತ್ತು ನಾಯಕನಾಗಿ 25 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದು 1975 ಮಾರ್ಚ್ 17 ರಂದು ಚೆನ್ನೈನ ಕಲ್ಯಾಣಿ ಆಸ್ಪತ್ರೆಯಲ್ಲಿ ವರನಟ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮರವರ ಕಿರಿಯ ಪುತ್ರನಾಗಿ ಜನಿಸಿದ್ದು ಇವರ ಹಿರಿಯ ಸಹೋದರರಾದ ಶಿವರಾಜಕುಮಾರ್ ಹಾಗೂ ರಾಘವೇಂದ್ರ ರಾಜಕುಮಾರ್ ಕೂಡ ಕನ್ನಡ ಚಿತ್ರರಂಗದ ಯಶಸ್ವಿ ನಾಯಕನಟರಾಗಿದ್ದಾರೆ. ಹೌದು ಇವರು ರಾಜ್ ದಂಪತಿಗಳ ಕಿರಿಯ ಮಗುವಾಗಿದ್ದರಿಂದ ಬಹು ಅಕ್ಕರೆಯಲ್ಲಿ ಬೆಳೆದಿದ್ದು ಪುನೀತ್ ಹಾಗೂ ಸಹೋದರಿ ಪೂರ್ಣಿಮಾರನ್ನು ರಾಜ್ ತಮ್ಮ ಬಹುತೇಕ ಚಿತ್ರಗಳ ಶೂಟಿಂಗ್ಗೆ ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿದ್ದರು.
ಹೌದು ಹೀಗಾಗಿ ಬಾಲ್ಯದಿಂದಲೇ ಕಲೆಯ ಜೊತೆಗಿನ ನಂಟು ಆರಂಭವಾಗಿದ್ದು ಪುನೀತ್ ರವರು ಆರು ತಿಂಗಳು ಮಗುವಿದ್ದಾಗ 1976 ರಲ್ಲಿ ತೆರೆಕಂಡ ಪ್ರೇಮದ ಕಾಣಿಕೆ ಸಿನಿಮಾದ ಮೂಲಕ ತೆರೆಯ ಮೇಲೆ ಕಾಣಿಸಿಕೊಂಡರು. ಹೌದು ತದ ನಂತರ ಬಂದ ಸನಾದಿ ಅಪ್ಪಣ್ಣ ತಾಯಿಗೆ ತಕ್ಕ ಮಗ ವಸಂತ ಗೀತ ಭೂಮಿಗೆ ಬಂದ ಭಗವಂತ ಭಾಗ್ಯವಂತರು ಹೀಗೆ ಮುಂತಾದ ಚಿತ್ರಗಳಲ್ಲಿ ನಟಿಸಿ ತಮ್ಮ ಅಭಿನಯ ಪ್ರೌಡಿಮೆ ಮೆರೆದಿದ್ದು ಇನ್ನು ಭಾಗ್ಯವಂತ ಚಿತ್ರದ ಬಾನ ದಾರಿಯಲ್ಲಿ ಸೂರ್ಯ ಚಲಿಸುವ ಮೋಡಗಳು ಚಿತ್ರದ ಕಾಣದಂತೆ ಮಾಯವಾದನೋ ಯಾರಿವನು ಚಿತ್ರದ ಕಣ್ಣಿಗೆ ಕಾಣುವ ದೇವರು ಮುಂತಾದ ಗೀತೆಗಳನ್ನು ಹಾಡಿ ಹಿನ್ನೆಲೆ ಗಾಯಕರಾಗಿಯೂ ಪ್ರಶಂಸೆ ಪಡೆದಿದ್ದು ಇನ್ನು ಚಲಿಸುವ ಮೋಡಗಳು ಮತ್ತು ಎರಡು ನಕ್ಷತ್ರಗಳು ಚಿತ್ರದ ಅಭಿನಯಕ್ಕಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದರು.
ಬಾಲಕಲಾವಿದನಾಗಿ ಪುನೀತ್ ರಾಜ್ ಕುಮಾರ್ ರವರ ಅಭಿನಯಿಸಿದ ಉತ್ಕೃಷ್ಟ ಚಿತ್ರ ಬೆಟ್ಟದ ಹೂ. ಹೌದು 1984 ರಲ್ಲಿ ತೆರೆಕಂಡ ಎನ್ ಲಕ್ಷ್ಮಿ ನಾರಾಯಣ ನಿರ್ದೇಶನದ ಈ ಚಿತ್ರದಲ್ಲಿ ಪುನೀತ್ ಬಾಲಕ ರಾಮು ಆಗಿ ನಟಿಸಿದ್ದು ಶಾಲೆಗೆ ಹೋಗುವ ಬಡ ಬಾಲಕನೊಬ್ಬನ ತಳಮಳಗಳನ್ನು ಚಿತ್ರ ಚೆನ್ನಾಗಿ ಬಿಂಬಿಸಿತು. ಈ ಚಿತ್ರ ಇಂಗ್ಲೀಷ್ ಕಾದಂಬರಿ ವಾಟ್ ದೆನ್ ರಾಮನ್ ಆಧಾರಿತವಾಗಿದ್ದು ಈ ಚಿತ್ರದ ಅಭಿನಯಕ್ಕಾಗಿ ಪುನೀತ್ಗೆ ರಾಷ್ಟ್ರ ಪ್ರಶಸ್ತಿ ದೊರೆಯಿತು.2002 ರಲ್ಲಿ ತೆರೆಕಂಡ ಪುರಿ ಜಗನ್ನಾಥ ನಿರ್ದೇಶನದ ಅಪ್ಪು ಚಿತ್ರದಿಂದ ನಾಯಕನಟನಾಗಿ ಕನ್ನಡ ಚಿತ್ರರಂಗದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು ಈ ಚಿತ್ರ ಅದ್ಧೂರಿ ಯಶಸ್ಸು ಕಂಡಿತು.
ಬಳಿಕ ತೆರೆಗೆ ಬಂದ ಅಭಿ ವೀರ ಕನ್ನಡಿಗ ಮೌರ್ಯ ಆಕಾಶ್ ನಮ್ಮ ಬಸವ ಅಜಯ್ ಮುಂತಾದ ಚಿತ್ರಗಳು ಬಾಕ್ಸಾಫೀಸಿನಲ್ಲಿ ಒಳ್ಳೆ ದಾಖಲೆ ಮಾಡಿ ಅದ್ದೂರಿ ಪ್ರದರ್ಶನ ಕಂಡಿದ್ದು ಹೌದು ಇವರು ನಾಯಕನಾಗಿ ನಟಿಸಿದ ಮೊದಲ ಹತ್ತು ಚಿತ್ರಗಳು ಶತದಿನ ಪೂರೈಸಿದ್ದು ದಾಖಲೆ. ನಾಯಕನಾಗಿ ಎರಡು ರಾಜ್ಯ ಪ್ರಶಸ್ತಿ ನಾಲ್ಕು ಫಿಲ್ಮಫೇರ್ ಎರಡು ಸೈಮಾ ಹೀಗೆ ಹತ್ತು ಹಲವು ಪ್ರಶಸ್ತಿ ಪಡೆದಿದ್ದಾರೆ. ಗಾಯಕನಾಗಿ ಸರಿಸುಮಾರು ಐವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಡಿರುವ ಪುನೀತ್ ರವರು ಗಾಯನದಿಂದ ಬರುವ ಸಂಪೂರ್ಣ ಹಣವನ್ನು ಸಮಾಜಸೇವೆಗೆ ವಿನಿಯೋಗಿಸಿದ್ದಾರೆ. ಹೌದು ಕಿರುತೆರೆಯಲ್ಲಿ ನಿರೂಪಕರಾಗಿ ಕನ್ನಡದ ಕೋಟ್ಯಾಧಿಪತಿಯ ಎರಡು ಸೀಸನ್ಗಳನ್ನು ಮತ್ತು ಫ್ಯಾಮಿಲಿ ಪವರ್ ಎಂಬ ರಿಯಾಲಿಟಿ ಶೋಗಳನ್ನು ನಿರೂಪಿಸಿದ್ದು ವೀಕೆಂಡ್ ವಿಥ್ ರಮೇಶ್ ಕಾರ್ಯಕ್ರಮದ ಮೊಟ್ಟಮೊದಲ ಅತಿಥಿಯಾಗಿ ಭಾಗವಹಿಸಿದ್ದು ವಿಶೇಷವಾಗಿದೆ.
ಚಿತ್ರ ನಿರ್ಮಾಪಕರಾಗಿ ಕವಲುದಾರಿ ಮಾಯಾಬಜಾರ್ ಎಂಬ ಚಿತ್ರಗಳನ್ನು ತಮ್ಮ ಹೋಮ್ ಬ್ಯಾನರ್ನಲ್ಲಿಯೇ ನಿರ್ಮಸಿರುವ ಪುನೀತ್ ತಮ್ಮ ಪ್ರೋಡಕ್ಸನ್ ಹೌಸ್ ಮೂಲಕ ಕಿರುತೆರೆ ಧಾರಾವಾಹಿ ಕೂಡ ನಿರ್ಮಿಸಿದ್ದು ತಾಯಿಯ ನೆನಪಿನಲ್ಲಿ ಪಿ.ಅರ್.ಕೆ ಆಡಿಯೋ ಕಂಪನಿಯೊಂದನ್ನು ಸ್ಥಾಪಿಸಿದ್ದಾರೆ. ಇದಲ್ಲದೆ ಅಮೇಜಾನ್ ಪ್ರೈಮ್ ಸಹಭಾಗಿತ್ವದಲ್ಲಿ ಫ್ರೆಂಚ್ ಬಿರಿಯಾನಿ ಲಾ ಎಂಬ ಚಿತ್ರಗಳನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಮೈಸೂರಿನ ಶಕ್ತಿ ಧಾಮ ಆಶ್ರಮದ ಮೂಲಕ ಸಮಾಜ ಸೇವೆಯಲ್ಲಿ ತೊಡಗಿರುವ ಪುನೀತ್ ಬೆಂಗಳೂರು ಪ್ರೀಮೀಯರ್ ಪುಟ್ಬಾಲ್ ತಂಡದ ಒಡೆತನವನ್ನು ಹೊಂದಿದ್ದು ಕರ್ನಾಟಕ ಸರ್ಕಾರದ ನಂದಿನಿ ಹಾಲು ಉತ್ಪನ್ನಗಳು ಮತ್ತು LED ಬಲ್ಬ್ಗಳ ರಾಯಭಾರಿಯಾಗಿ ಕೂಡ ಆಗುದ್ದರು.
ಒಂದು ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಭಾರಿಯಾಗಿದ್ದು 1999 ರಲ್ಲಿ ಚಿಕ್ಕಮಗಳೂರಿನವರಾದ ಅಶ್ವಿನಿಯವರನ್ನು ಕೈಹಿಡಿದರು.ಈ ದಂಪತಿಗಳಿಗೆ ಧೃತಿ ಮತ್ತು ವಂದಿತಾ ಎಂಬ ಪುತ್ರಿಯರಿದ್ದಾರೆ. ಸದ್ಯ ಇದೀಗ ಕಿರಿಯ ಮಗಳು ವಂದಿತ ಎಸೆಸೆಲ್ಸಿಯಲ್ಲಿ ಉತ್ತಮ ಅಂಕ ಪಡೆದುಕೊಂಡಿದ್ದು ಮುಂದೆ ಪಿಯುಸಿ ವ್ಯಾಸಂಗ ಮಾಡಲಿದ್ದಾರೆ. ಇನ್ನು ಅಪ್ಪು ಮಕ್ಕಳಿಬ್ಬರು ಕೂಡ ವಿದ್ಯಾಭ್ಯಾಸ ಮುಗಿದ ಬಳಿಕ ದೊಡ್ಡ ಮಟ್ಟದಲ್ಲಿ ಕೆಲಸಕ್ಕೆ ಹೋಗಬೇಕು ಎಂಬುವ ಹಂಬಲವೇನೂ ಇಲ್ಲ. ಆದರೆ ತನ್ನ ತಂದೆಯಂತೆಯೇ ಜನರಿಗೆ ಸಹಾಯ ಮಾಡಬೇಕು ಎಂಬುವಂತಹ ದೊಡ್ಡ ಕನಸನ್ನು ಹೊಂದಿದ್ದಾರೆ ಅಪ್ಪು ಮಕ್ಕಳು. ಹೀಗಾಗಿ ಪುನೀತ್ ರಾಜ್ ಕುಮಾರ್ ರವರ ಟ್ರಸ್ಟ್ ನಲ್ಲಿಯೇ ಅಪ್ಪು ಮಕ್ಕಳು ಕೆಲಸ ಮಾಡಲಿದ್ದಾರೆ. ಹೌದು ಅಪ್ಪು ಬದುಕಿದ್ದಾಗ ತನ್ನ ತಂದೆಗೆ ವಂದಿತ ಅವರು ನಮ್ಮ ಟ್ರಸ್ಟ್ ನಲ್ಲಿಯೇ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರಂತೆ. ಕಷ್ಟದಲ್ಲಿ ಇರುವ ಅನೇಕರಿಗೆ ತಂದೆಯಂತೆಯೇ ನೆರವಾಗುತ್ತೇನೆ ಎಂದು ತಿಳಿಸಿದ್ದಾರೆ.
